ಕುಂದಾಪುರ, ಜ. 24 : ತಾಲೂಕಿನ ಶೆಟ್ರಕಟ್ಟೆಯಲ್ಲಿ ಶನಿವಾರ(ಜ24)ಮತ್ತೊಂದು ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ.
ತಿರುವಿನಲ್ಲಿ ಬಸ್ಸನ್ನು ಓವರ್ ಟೇಕ್ ಮಾಡಿಕೊಂಡು ಹೋಗುವಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಸೌಕೂರು ನಿವಾಸಿ ವಿಜಯ್ (25) ಮೃತಪಟ್ಟಿದ್ದಾನೆ. ವಿಜಯ್ ಗುಲ್ವಾಡಿ ಗ್ರಾಮದ ಸೌಕೂರು ನಿವಾಸಿಯಾಗಿದ್ದು, ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ.

