ಕುಂದಾಪುರ, ಜ. 01 : ಆಯಿಲ್ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವುಂಟಾದ ಘಟನೆ ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ನಡೆದಿದೆ.

ಬುಧವಾರ ತಡರಾತ್ರಿ ಶ್ರೀ ಮಧುಮಾಯ ಆಯಿಲ್ಸ್(ಮಧು) ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ ನಿಂದ ತಲಾ ಒಂದೊಂದು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಸ್ಥಳೀಯರ ಸಹಕಾರದಲ್ಲಿ ರಾತ್ರಿಯಿಂದ ಬೆಳಗ್ಗೆ 9ರ ವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ತೊಡಗಿಸಿಕೊಂಡಿದ್ದಾರೆ. ತೆಂಗಿನೆಣ್ಣೆ ಆದ ಕಾರಣ ಬೆಂಕಿಯ ತೀವೃತೆ ಹೆಚ್ಚಾಗಿತ್ತು.

