ಬೆಳಗಾವಿ : ‘ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು’ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

File Photo

ಬೆಳಗಾವಿ, ಡಿ. 18 : ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ಕಂತುಗಳ ಲೆಕ್ಕದಲ್ಲಿ ನಾನು ಸದನಕ್ಕೆ ಮಾಹಿತಿ ನೀಡಿದ್ದೆ. ಆದರೆ, ಫೆಬ್ರವರಿ, ಮಾರ್ಚ್ ತಿಂಗಳ ಹಣ ಸಂದಾಯ ಆಗಿಲ್ಲ ಎಂದು ವಿರೋಧ ಪಕ್ಷದವರು ಪ್ರಶ್ನಿಸಿದಾಗ, ನಾನು ಹಣಕಾಸು ಇಲಾಖೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿದೆ. ನಾನು ಇದರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಜಮಾ ಆಗಿಲ್ಲದಿದ್ದರೆ ಹಣವನ್ನು ಹಾಕುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

Advertisement

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದೇನೆ. ನಾವು ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು. ಹಾದಿ ಬೀದಿಯಲ್ಲಿ ಯೋಜನೆ ವಿರುದ್ಧ ಹೋರಾಟ ಮಾಡಿ ಮಾತನಾಡುತ್ತಿದ್ದರು. ಈಗ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿದ್ದು, ಕೋಟ್ಯಂತರ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಈಗ ಇದ್ದಕ್ಕಿದಂತೆ ಬಿಜೆಪಿ ನಾಯಕರಿಗೆ ಗೃಹಲಕ್ಷ್ಮೀ ಯೋಜನೆ ಬಗ್ಗೆ ಕಾಳಜಿ ಶುರುವಾಗಿದೆ.

ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮಾ ಆಗಿಲ್ಲ. ಅದನ್ನು ಹಾಕಿಸುವ ಕೆಲಸ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲವೂ ಇಲ್ಲ, ಗೊಂದಲಗಳೂ ಬೇಡ. ಅನಗತ್ಯವಾಗಿ ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.