ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಕಂಟಕ – ಪೊಲೀಸರು ಬರುತ್ತಿದ್ದಂತೆ ಮನೆಯಿಂದ ಪರಾರಿಯಾದ ಮಹೇಶ್ ಶೆಟ್ಟಿ

ಬೆಳ್ತಂಗಡಿ, ಡಿ. 18 : ರೌಡಿಶೀಟರ್ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಈಗ ಮತ್ತೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ಬಾರಿ ಗಡಿಪಾರು ಆದೇಶವನ್ನು ನ್ಯಾಯಾಲಯದ ಆದೇಶದಂತೆ ತಡೆಹಿಡಿಯಲಾಗಿತ್ತು.

Advertisement

ಆದರೆ, ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ರೌಡಿಶೀಟರ್ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆನ್ನಲಾಗಿದೆ.

ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರೆಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್‌ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ತಿಮರೋಡಿಗೆ ಮೊದಲೇ ಮಾಹಿತಿ ತಿಳಿದು ಮನೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.