ಮಲವಂತಿಗೆ : ಪಾಮಾಜಿ ಪ್ರದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾರಿಂದ ಶಿಲನ್ಯಾಸ

ಮಲವಂತಿಗೆ : ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಬಹು ಬೇಡಿಕೆಯ ರಸ್ತೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಅವರು ಅನುದಾನ ಒದಗಿಸಿ, ಶಿಲನ್ಯಾಸ ನೆರವೇರಿಸಿದ್ದಾರೆ.

Advertisement

ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ, ಇಲ್ಲಿ ಪಟ್ಟ ಜಾಗ ಹೆಚ್ಚಾಗಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಡಕಾಗಿತ್ತು, ಈ ಹಿನ್ನಲೆಯಲ್ಲಿ ಶಾಸಕರು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿದ್ದರು. ಸ್ಥಳೀಯರು ರಸ್ತೆ ನಿರ್ಮಾಣಕ್ಕೆ ತಮ್ಮ ಜಾಗವನ್ನು ನೀಡಿ ಸಹಕರಿಸಿದ ಹಿನ್ನಲೆಯಲ್ಲಿ ಇದೀಗ ರಸ್ತೆ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷರಾದ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

⚠️ Contents are protected on this website.