ಬೆಳ್ತಂಗಡಿ : ಭಾರಿ ಗಾಳಿ ಮಳೆಗೆ ಅಪಾರ ಹಾನಿ – ರಾತ್ರೋ ರಾತ್ರಿ ಶಾಸಕ ಹರೀಶ್ ಪೂಂಜಾ ಭೇಟಿ, ಪರಿಹಾರದ ಭರವಸೆ

ಬೆಳ್ತಂಗಡಿ, ಮಾ. 29 : ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಭಾರೀ ಗಾಳಿ ಮಳೆಗೆ ಹಲವು ಕಡೆಗಳಲ್ಲಿ ಮನೆ ಸೇರಿದಂತೆ ಅಪಾರ ಹಾನಿ ಸಂಭವಿಸಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾನಿಗೊಳಗಾದ ಸ್ಥಳಗಳಿಗೆ ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ ಮನೆಯವರಿಗೆ ಧೈರ್ಯ ತುಂಬಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ. ಈ ವೇಳೆ ಶಾಸಕರೊಂದಿಗೆ ಯೋಗೀಶ್ ಅಲಂಬಿಲ ಸೇರಿದಂತೆ ಇನ್ನಿತರರು ಇದ್ದರು.

Advertisement

ಕೊಕ್ಕಡ ಗ್ರಾಮದ ದಡ್ಡು ಎಂಬಲ್ಲಿಯ ಕಾಂತಪ್ಪ ಗೌಡ ಅವರ ಮನೆಯ ಮೇಲಿನ ಮಹಡಿಯ ಶೀಟ್ ಸಂಪೂರ್ಣ ಹಾನಿ, ಪಟ್ರಮೆಯ ಬೋಳೊಡಿ, ಕಳೆಂಜ ಗ್ರಾಮದ ಪಾದೆ, ಪಡಂಗಡಿ ಗ್ರಾಮದದಲ್ಲಿ ಕೋಳಿ ಫಾರ್ಮ್ ನೆಲಕ್ಕುರುಳಿದ್ದು ಹಾಗೂ ತೆಂಕಕಾರಂದೂರು, ಬಳೆಂಜ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿಯೂ ವಿಪರೀತ ಗಾಳಿಯಿಂದಾಗಿ ಮನೆ, ಕೊಟ್ಟಿಗೆ, ಕೃಷಿಗೆ ಭಾರೀ ಹಾನಿ ಉಂಟಾಗಿದೆ. ಬೆಳ್ತಂಗಡಿ ಸಂತೆಕಟ್ಟೆ ಬಳಿ ರಿಕ್ಷಾ ತಂಗುದಾಣದ ಮೇಲ್ಟಾವಣಿ ಧರೆಗುರುಳಿ ಬಿದ್ದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.