ಬೆಳ್ತಂಗಡಿ : ಭಾರಿ ಗಾಳಿ ಮಳೆಗೆ ಅಪಾರ ಹಾನಿ – ರಾತ್ರೋ ರಾತ್ರಿ ಶಾಸಕ ಹರೀಶ್ ಪೂಂಜಾ ಭೇಟಿ, ಪರಿಹಾರದ ಭರವಸೆ

ಬೆಳ್ತಂಗಡಿ, ಮಾ. 29 : ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಭಾರೀ ಗಾಳಿ ಮಳೆಗೆ ಹಲವು ಕಡೆಗಳಲ್ಲಿ ಮನೆ ಸೇರಿದಂತೆ ಅಪಾರ ಹಾನಿ ಸಂಭವಿಸಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾನಿಗೊಳಗಾದ ಸ್ಥಳಗಳಿಗೆ ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ ಮನೆಯವರಿಗೆ ಧೈರ್ಯ ತುಂಬಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ. ಈ ವೇಳೆ ಶಾಸಕರೊಂದಿಗೆ ಯೋಗೀಶ್ ಅಲಂಬಿಲ ಸೇರಿದಂತೆ ಇನ್ನಿತರರು ಇದ್ದರು.

Advertisement

ಕೊಕ್ಕಡ ಗ್ರಾಮದ ದಡ್ಡು ಎಂಬಲ್ಲಿಯ ಕಾಂತಪ್ಪ ಗೌಡ ಅವರ ಮನೆಯ ಮೇಲಿನ ಮಹಡಿಯ ಶೀಟ್ ಸಂಪೂರ್ಣ ಹಾನಿ, ಪಟ್ರಮೆಯ ಬೋಳೊಡಿ, ಕಳೆಂಜ ಗ್ರಾಮದ ಪಾದೆ, ಪಡಂಗಡಿ ಗ್ರಾಮದದಲ್ಲಿ ಕೋಳಿ ಫಾರ್ಮ್ ನೆಲಕ್ಕುರುಳಿದ್ದು ಹಾಗೂ ತೆಂಕಕಾರಂದೂರು, ಬಳೆಂಜ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿಯೂ ವಿಪರೀತ ಗಾಳಿಯಿಂದಾಗಿ ಮನೆ, ಕೊಟ್ಟಿಗೆ, ಕೃಷಿಗೆ ಭಾರೀ ಹಾನಿ ಉಂಟಾಗಿದೆ. ಬೆಳ್ತಂಗಡಿ ಸಂತೆಕಟ್ಟೆ ಬಳಿ ರಿಕ್ಷಾ ತಂಗುದಾಣದ ಮೇಲ್ಟಾವಣಿ ಧರೆಗುರುಳಿ ಬಿದ್ದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.