ಬೆಳ್ತಂಗಡಿ : ಗುಡುಗು ಸಹಿತ ಭಾರೀ ಗಾಳಿ ಮಳೆ – ಹಲವೆಡೆ ಭಾರಿ ಹಾನಿ

ಬೆಳ್ತಂಗಡಿ, ಏ. 21 : ತಾಲೂಕಿನಲ್ಲಿ ಸೋಮವಾರ ಸಂಜೆ ,ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

Advertisement

ಮುಂಡಾಜೆ ಗ್ರಾ. ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ದಿಡುಪೆ-ಮುಂಡಾಜೆ ರಸ್ತೆಯ ಕುರುಡ್ಯ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ವ್ಯತ್ಯಯ ಉಂಟಾಯಿತು. ಮಂಜುಶ್ರೀ ನಗರದ ಶ್ರೀಪತಿ ಆಚಾರ್ಯ ಎಂಬವರ ಮನೆ ಮೇಲೆ ತೆಂಗಿನ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. ದಿನೇಶ್ ಆಚಾರ್ಯ ಎಂಬವರ ಕಾರಿನ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕುಳೂರು ಪ್ರದೇಶದ ರಾಧಾ ಪೂಜಾರಿ ಎಂಬವರ ಮನೆಯ ಹೆಂಚುಗಳು ಗಾಳಿಗೆ ಹಾರಿಹೋಗಿವೆ. ಮನೆ ಪರಿಸರದಲ್ಲಿ ನಾಲ್ಕು ಮರಗಳು ಉರುಳಿ ಬಿದ್ದಿವೆ.

ಯಶೋದಾ ಎಂಬವರ ಮನೆಯ ಶೀಟುಗಳಿಗೆ ಹಾನಿ ಉಂಟಾಗಿದೆ. ಮುಂಡಾಜೆಯ ಜನತಾ ಕಾಲೋನಿಯಲ್ಲಿ ನಾಲ್ಕು ಮನೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. ನೂರಾರು ಅಡಕೆ, ರಬ್ಬರ್ ಗಿಡಗಳು ಧರಾಶಾಹಿಯಾಗಿವೆ. ತಾಲೂಕಿನಾದ್ಯಂತ ವಿದ್ಯುತ್ ಪೂರೈಕೆ, ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದವರು, ಸ್ಥಳೀಯರು ಮರಗಳ ತೆರವಿಗೆ ಸಹಕಾರ ನೀಡಿದ್ದಾರೆ. ಉಜಿರೆ ಮತ್ತು ಇಂದಬೆಟ್ಟು ರಸ್ತೆಯ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಎಂಬಲ್ಲಿ ನೂತನ ಸೇತುವೆ ನಿರ್ಮಾಣವಾಗುತ್ತಿದ್ದು ಇಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಭಾರಿ ಮಳೆಗೆ ಕುಸಿದಿದೆ. ಇಲ್ಲಿ ಘನ ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.