ಬೆಳ್ತಂಗಡಿ : 2026ನೇ ಮಾರ್ಚ್ ತಿಂಗಳಲ್ಲಿ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ನ.16 ರಂದು ದೇವಾಲಯದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾತನಾಡಿ, ನಾವೆಲ್ಲರೂ ಒಂದೇ ಎಂಬ ಭಾವನೆಯಲ್ಲಿ ಯಶಸ್ವಿಯಾಗಿ ಬ್ರಹ್ಮಕಲಶೋತ್ಸವ ನಡೆಸಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ರೈತ ಬಂಧು, ಆಡಳಿತ ಸಮಿತಿ ಅಧ್ಯಕ್ಷ ಸದಾನಂದ ಮೇಲಾಂಟ, ದೇವಸ್ಥಾನದ ಆಡಳಿತ ಮಂಡಳಿಯ ಮೋಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೋಟ್ಟು, ಗೌರವ ಸಲಹೆಗಾರ ಯೋಗೀಶ್ ಕುಮಾರ್ ಕಡ್ತಿಲ, ಪ್ರಧಾನ ಸಂಚಾಲಕ ಹರ್ಷ ಮೇಲಾಂಟ, ಕಾರ್ಯಾಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲ್ಲೆಂಗಲ್ಲು, ಕಾರ್ಯದರ್ಶಿ ರಘುಪತಿ ಭಟ್ ಅಣಬೆ, ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಪುಲ್ಲಾ ಮುಗುರೋಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಣಿಯೂರು ವಲಯ ಮೇಲ್ವಿಚಾರಕಿ ಶಿಲ್ಪ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.


