ಬೆಳ್ತಂಗಡಿ : ಮನೆ ಸಮೀಪದಲ್ಲೇ ಕಾಡಾನೆ ಠಿಕಾಣಿ – ಮನೆಮಂದಿಗೆ ಆತಂಕ

ಮಲವಂತಿಗೆ, ಜ. 19 : ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ ರವಿವಾರ ಸಂಜೆಯ ವೇಳೆಗೆ ಮನೆಯೊಂದರ ಸಮೀಪದಲ್ಲೇ ಆನೆಯೊಂದು ಠಿಕಾಣಿ ಹೂಡಿ ಮನೆಮಂದಿಯನ್ನು ಆತಂಕಕ್ಕೀಡು ಮಾಡಿದೆ. ದಿಡುಪೆಯ ರುಕ್ಮಯ್ಯ ಗೌಡ ಅವರ ಮನೆ ಸಮೀಪ ರವಿವಾರ ಸಂಜೆ 6ರ ಸುಮಾರಿಗೆ ಕಾಡಾನೆ ಕಂಡು ಬಂದಿದ್ದು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಪ್ರಯತ್ನಪಟ್ಟರೂ ಅದು ಕದಲದೆ ಅಲ್ಲೇ ನಿಂತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

ಜ. 17ರ ರಾತ್ರಿ ಕಾಡಾನೆ ದಿಡುಪೆಯ ಜನತಾ ಕಾಲನಿ, ಪೇಟೆ ಪರಿಸರ ಸೇರಿದಂತೆ ಹಲವೆಡೆ ಜನನಿಬಿಡ ಪ್ರದೇಶಗಳಲ್ಲೇ ಸಂಚರಿಸಿದೆ ಎನ್ನಲಾಗಿದೆ. ಅಲ್ಲದೆ, ತಾಲೂಕಿನ ಹಲವು ಭಾಗಗಳಲ್ಲಿ ಕಾಡಾನೆ ಸಂಚಾರ ಕಂಡು ಬಂದಿದೆ. ಜೊತೆಯಲ್ಲಿ ಚಿರತೆಯ ಹಾವಳಿಯೂ ಹೆಚ್ಚಾಗಿದ್ದು, ಜನತೆ ಆತಂಕ ಪಡುವಂತಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಅರಣ್ಯದಂಚಿನ ಜನರಿಗೆ ಮೂಲಭೂತ ಸೌಕರ್ಯಕ್ಕೆ ಶಾಸಕ ಹರೀಶ್ ಪೂಂಜಾ ಮನವಿ

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವದಂತಿಗೆ ನಿಜವೇ ? – ಪ್ರಮೋದ್ ಮಧ್ವರಾಜ್ ಸ್ಪಷ್ಟನೆಯೇನು ನೋಡಿ

⚠️ Contents are protected on this website.