ಉಡುಪಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನಿಂದ ಯುವತಿಗೆ ಚೂರಿ ಇರಿತ – ಯುವತಿಗೆ ಗಂಭೀರ ಗಾಯ

ಉಡುಪಿ, ಮೇ 13 : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಘಟನೆ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್‌ನ ಮಹಿಳಾ ಪಿಜಿಯಲ್ಲಿ ನಡೆದಿದೆ.

ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೊಳಗಾದ ಯುವತಿ. ಮಂಗಳವಾರ ರಾತ್ರಿ ಪಿಜಿಗೆ ಬಂದ ಆರೋಪಿ ಯುವತಿಯೊಂದಿಗೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ನಡೆಸಿದ ಆರೋಪಿ ಪರಾರಿಯಾಗಿದ್ದು, ಮಣಿಪಾಲ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.