ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ – ಮೈತೇಯಿ ಸಮುದಾಯದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

ಇಂಫಾಲ, ಜ. 22 : ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಅಪಹರಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಇದು ರಾಜ್ಯದಲ್ಲಿ ಉದ್ವಿಗ್ನತೆ ಹೆಚ್ಚಲು ಕಾರಣವಾಗಿದೆ.

Advertisement

ಮಯಾಂಗಲಂಬಮ್ ರಿಷಿಕಾಂತ ಸಿಂಗ್ ಅವರನ್ನು ಬುಧವಾರ ತುಯಿಬಾಂಗ್ ಪ್ರದೇಶದ ನಿವಾಸದಿಂದ ಅಪಹರಿಸಿ, ನಟಜಂಗ್ ಗ್ರಾಮದ ಸಮೀಪದಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಹರಣಕಾರರು ಕಾರ್ಯಾಚರಣೆಗಳ ಅಮಾನತು (SOO) ಒಪ್ಪಂದಕ್ಕೆ ಸಹಿ ಹಾಕದ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ (UNKA) ಸದಸ್ಯರಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯದೆಲ್ಲೆಡೆ ಪೊಲೀಸ್ ಮತ್ತು ಸೇನಾ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.