ಬೆಳ್ತಂಗಡಿ : ಮಟ್ಟಣ್ಣನವರ್ ನ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ !

ಬೆಳ್ತಂಗಡಿ, ಡಿ. 30 : ಧರ್ಮಸ್ಥಳದ ವಿರುದ್ಧ ಮಾಡಲಾಗಿದ್ದ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧವಾಗಿ ತನಿಖೆಗಾಗಿ ಗಿರೀಶ್ ಮಟ್ಟಣ್ಣನವ‌ರ್ ನ ಐಫೋನ್ ಮೊಬೈಲ್ ಹಾಗೂ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ ಲ್ಯಾಪ್ ಟಾಪ್, ಪೆನ್ ಡ್ರೈವ್ ಮತ್ತು ಇನ್ನಿತರ ಎಲೆಕ್ಟ್ರಾನಿಕ್ಸ್ ಪರಿಕರಗಳನ್ನು ಎಸ್‌ಐಟಿ ಸ್ವಾಧೀನಪಡಿಸಿಕೊಂಡಿತ್ತು.

Advertisement

ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಇಬ್ಬರ ಮೊಬೈಲ್, ಲ್ಯಾಪ್ ಟಾಪ್ ಬಿಡುಗಡೆ ಮಾಡಿಸಲು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ಡಿ.26 ರಂದು ತಕರಾರು ಸಲ್ಲಿಸಿದ್ದ ಎಸ್. ಐ. ಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ವಿಸ್ತ್ರತ ವಾದ ಮಂಡಿಸಿದ್ದರು. ಈ ಅರ್ಜಿಯ ಆದೇಶವನ್ನು ಡಿ.29ಕ್ಕೆ ಮುಂದೂಡಿದ್ದರು. ಇದೀಗ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಿಡುಗಡೆ ಅರ್ಜಿಯನ್ನು ವಜಾ ಮಾಡಿ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಆದೇಶ ಮಾಡಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.