ಬೆಳ್ತಂಗಡಿ : ಮಟ್ಟಣ್ಣನವರ್ ನ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ !

ಬೆಳ್ತಂಗಡಿ, ಡಿ. 30 : ಧರ್ಮಸ್ಥಳದ ವಿರುದ್ಧ ಮಾಡಲಾಗಿದ್ದ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧವಾಗಿ ತನಿಖೆಗಾಗಿ ಗಿರೀಶ್ ಮಟ್ಟಣ್ಣನವ‌ರ್ ನ ಐಫೋನ್ ಮೊಬೈಲ್ ಹಾಗೂ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ ಲ್ಯಾಪ್ ಟಾಪ್, ಪೆನ್ ಡ್ರೈವ್ ಮತ್ತು ಇನ್ನಿತರ ಎಲೆಕ್ಟ್ರಾನಿಕ್ಸ್ ಪರಿಕರಗಳನ್ನು ಎಸ್‌ಐಟಿ ಸ್ವಾಧೀನಪಡಿಸಿಕೊಂಡಿತ್ತು.

Advertisement

ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಇಬ್ಬರ ಮೊಬೈಲ್, ಲ್ಯಾಪ್ ಟಾಪ್ ಬಿಡುಗಡೆ ಮಾಡಿಸಲು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ಡಿ.26 ರಂದು ತಕರಾರು ಸಲ್ಲಿಸಿದ್ದ ಎಸ್. ಐ. ಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ವಿಸ್ತ್ರತ ವಾದ ಮಂಡಿಸಿದ್ದರು. ಈ ಅರ್ಜಿಯ ಆದೇಶವನ್ನು ಡಿ.29ಕ್ಕೆ ಮುಂದೂಡಿದ್ದರು. ಇದೀಗ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಿಡುಗಡೆ ಅರ್ಜಿಯನ್ನು ವಜಾ ಮಾಡಿ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಆದೇಶ ಮಾಡಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಗರಿಷ್ಠ ತಾಪಮಾನ – ಸೂರ್ಯಾಘಾತಕ್ಕೆ ಒಳಗಾದ ಬಾಲಕನ ದೇಹದಲ್ಲಿ ಸುಟ್ಟ ಗಾಯ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

⚠️ Contents are protected on this website.