ಬೆಳ್ತಂಗಡಿ : ಮಟ್ಟಣ್ಣನವರ್ ನ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ !

ಬೆಳ್ತಂಗಡಿ, ಡಿ. 30 : ಧರ್ಮಸ್ಥಳದ ವಿರುದ್ಧ ಮಾಡಲಾಗಿದ್ದ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧವಾಗಿ ತನಿಖೆಗಾಗಿ ಗಿರೀಶ್ ಮಟ್ಟಣ್ಣನವ‌ರ್ ನ ಐಫೋನ್ ಮೊಬೈಲ್ ಹಾಗೂ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ ಲ್ಯಾಪ್ ಟಾಪ್, ಪೆನ್ ಡ್ರೈವ್ ಮತ್ತು ಇನ್ನಿತರ ಎಲೆಕ್ಟ್ರಾನಿಕ್ಸ್ ಪರಿಕರಗಳನ್ನು ಎಸ್‌ಐಟಿ ಸ್ವಾಧೀನಪಡಿಸಿಕೊಂಡಿತ್ತು.

Advertisement

ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಇಬ್ಬರ ಮೊಬೈಲ್, ಲ್ಯಾಪ್ ಟಾಪ್ ಬಿಡುಗಡೆ ಮಾಡಿಸಲು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ಡಿ.26 ರಂದು ತಕರಾರು ಸಲ್ಲಿಸಿದ್ದ ಎಸ್. ಐ. ಟಿ ಪರ ವಕೀಲ ದಿವ್ಯರಾಜ್ ಹೆಗ್ಡೆ ವಿಸ್ತ್ರತ ವಾದ ಮಂಡಿಸಿದ್ದರು. ಈ ಅರ್ಜಿಯ ಆದೇಶವನ್ನು ಡಿ.29ಕ್ಕೆ ಮುಂದೂಡಿದ್ದರು. ಇದೀಗ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಿಡುಗಡೆ ಅರ್ಜಿಯನ್ನು ವಜಾ ಮಾಡಿ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಆದೇಶ ಮಾಡಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಡಾಯಿಕಲ್ಲಿನಲ್ಲಿ ಕಾಲು ಉಳುಕಿ ಸಿಲುಕಿಕೊಂಡಿದ್ದ ಯುವಕ – ಅಗ್ನಿಶಾಮಕ ದಳ, ಪೊಲೀಸರ ಸಾಹಸಮಯ ಕಾರ್ಯಾಚರಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ – ಲಂಚ ನೀಡಿದ್ದರೆ ಹಣ ವಾಪಸ್ ಕೊಡುತ್ತೇನೆಂದ ಶಾಸಕರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿಶಿಲ : ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ – ಶಾಸಕ ಹರೀಶ್ ಪೂಂಜ

⚠️ Contents are protected on this website.