ಉಡುಪಿ : ಉಡುಪಿ ಶ್ರೀ ಕೃಷ್ಣ ನಗರಿಯಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ದೊರಕಿದೆ. ರೋಡ್ ಶೋ ಬಳಿಕ ನೇರವಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನರೇಂದ್ರ ಮೋದಿಯವರು ದೇವರ ದರ್ಶನ ಪಡೆದರು.


ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನಕನ ಕಿಂಡಿಯ ಮುಖೇನ ಭಗವಾನ್ ಶ್ರೀ ಕೃಷ್ಣನ ದರ್ಶನವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಠದ ಶ್ರೀಗಳು ಹಾಗೂ ಅರ್ಚಕ ವೃಂದದವರು ಸಾಥ್ ನೀಡಿದರು.

