ಹೊಸದಿಲ್ಲಿ, ಜ. 26 : 77ನೇ ಗಣರಾಜ್ಯೋತ್ಸವದಂಗವಾಗಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದರು.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದಿಲ್ಲಿಯಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ. ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಅವರು ಕರ್ತವ್ಯ ಪಥದಲ್ಲಿ ನಡೆಯುವ ಗಣ ರಾಜ್ಯೋತ್ಸವದ ಪರೇಡ್ನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

