ಮೊಗ್ರು : ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ

Advertisement

ಮೊಗ್ರು, ಸೆ. 08 : ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರವಾಯನಕೆರೆ ಇವರ ಸ್ಮರಣಾರ್ಥ “ಕಾಶಿ ಶೆಟ್ಟಿ ವಿದ್ಯಾ ಮಂದಿರ” ಹಾಗೂ ಶಾಸಕರಾದ ಹರೀಶ್ ಪೂಂಜಾರವರ ನೆರವಿನಿಂದ ಮಕ್ಕಳ ಅನ್ನ ಯಜ್ಞಕ್ಕಾಗಿ ನಿರ್ಮಾಣಗೊಂಡ ಅಡುಗೆ ಕೊಠಡಿಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಸೆ. 06 ರಂದು ನೆರವೇರಿತು.

Advertisement

ಉದ್ಘಾಟನೆ ನೆರವೇರಿಸಿದ ಶ್ರೀ ಶಶಿಧರ ಶೆಟ್ಟಿ, ನವಶಕ್ತಿ ಗುರುವಾಯನಕೆರೆ ಇವರು ಮಾತನಾಡುತ್ತಾ, ಅಂದಾಜು ರೂ.7 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, ಶ್ರೀರಾಮ ಶಿಶು ಮಂದಿರ ಧಾರ್ಮಿಕ ಶಿಕ್ಷಣ ಮತ್ತು ಇಲ್ಲಿಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಟ್ಟಡಕ್ಕೆ ತನ್ನ ತಾಯಿ ಕಾಶಿ ಶೆಟ್ಟಿ ಸ್ಮರಣಾರ್ಥ ನೆರವು ನೀಡಿ, ಶ್ರೀರಾಮ ಶಿಶು ಮಂದಿರದ ಮುಂದಿನ ಅಭಿವೃದ್ಧಿ ಕಾರ್ಯಕ್ಕೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

Advertisement

ಮಕ್ಕಳಿಗೆ, ವಿಶೇಷವಾಗಿ ಆಕರ್ಷಣಿಯ ಶ್ರೀ ಕೃಷ್ಣ ಹಾಗೂ ರಾಧೆಯರ ವೇಷ ಭೂಷಣ ನೃತ್ಯ ಸ್ಪರ್ಧೆ, ಮಕ್ಕಳಿಗೆ,ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಮೊಸರು ಕುಡಿಕೆ,ಆಟೋಟ ಸ್ಪರ್ಧೆ ನೆರವೇರಿತು. ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) ಅಲೆಕ್ಕಿ , ಮುಗೇರಡ್ಕ ಇದರ ಗೌರವಾಧ್ಯಕ್ಷರಾದ ಶ್ರೀ ಉದಯ ಭಟ್ ಕೊಳಬ್ಬೆ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಮುಗೇರಡ್ಕ ಮೂವರು ದೈವಗಳ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ನಿವೃತ್ತ ಸೈನಿಕರಾದ ದೇವ ಪ್ರಸಾದ್ ಗೌಡ ಬರೆಮೇಲು,ಜೈ ಶ್ರೀ ರಾಮ ಟ್ರಸ್ಟ್ (ರಿ) ಅಧ್ಯಕ್ಷರಾದ ಅಶೋಕ ಬರುಂಗುಡೇಲು , ಮಹಿಳಾ ಮಂಡಲ ಅಧ್ಯಕ್ಷೆಯಾದ ಶ್ರೀಮತಿ ದೇಜಶ್ರೀ ಕೀಲಾರು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟಿಗಳು , ಪದಾಧಿಕಾರಿಗಳೂ ಮತ್ತು ಸರ್ವ ಸದಸ್ಯರು, ಪೋಷಕರು ಮಾತಾಜಿಯವರು ಸಹಕರಿಸಿದರು. ನಿವೃತ್ತ ಸೈನಿಕರಾದ ದೇವಪ್ರಸಾದ್ ಗೌಡ ಬರೆಮೇಲು ಇವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು .

ಬೆಳಗ್ಗೆ ಗಣಪತಿ ಹೋಮದೊಂದಿಗೆ ಪ್ರಾರಂಭವಾಗಿ, ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ,ಶ್ರೀ ಕೃಷ್ಣ, ಬಾಲಕೃಷ್ಣ ವೇಷಧಾರ ಹಾಗೂ ರಾಧಾಕೃಷ್ಣ ಸ್ಪರ್ಧೆ ನಡೆಯಿತು. ದಿವ್ಯಶ್ರೀ ಪದ್ಮುಂಜ ಇವರು ಪ್ರಾರ್ಥನೆಗೈದು, ಶ್ರೀಮತಿ ಪುಷ್ಪಲತಾ ಮಾತಾಜಿ ಸ್ವಾಗತದೊಂದಿಗೆ ಪ್ರಾಸ್ತವಿಕ ಮಾತನಾಡಿದರು. ಶ್ರೀಮತಿ ನವ್ಯಶ್ರೀ ಧನ್ಯವಾದ ಸಲ್ಲಿಸಿ. ಭರತೇಶ್ ಗೌಡ ಪುಣ್ಕೆದಡಿ ಇವರು ಕಾರ್ಯಕ್ರಮ ನಿರೂಪಿಸಿದರು, ನೆರೆದವರೆಲ್ಲರಿಗೂ ಸಿಹಿ ತಿಂಡಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭಿಮಾನಿಗಳು ಭಾಗವಹಿಸಿದ್ದರು, ಯಶಸ್ವಿಯಾಗಿ ಸಂಪನ್ನಗೊಂಡಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ