ಸ್ನೇಹಿತನ ತಂಗಿ ಜೊತೆ ಲವ್ ! ಸ್ನೇಹಿತನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆಗೈದ ಗೆಳೆಯರು

ದೇವನಹಳ್ಳಿ, ಡಿ. 18 : ಪ್ರತಿನಿತ್ಯ ಜೊತೆಯಾಗಿಯೇ ಓಡಾಡಿಕೊಂಡಿದ್ದರು.. ಮೋಜು ಮಸ್ತಿ ಅಂತ ಕುಟುಂಬಸ್ಥರಂತೆ ಜೊತೆಯಾಗಿಯೇ ಕಾಲ ಕಳೆಯುತ್ತಿದ್ದರವರು.! ಆದರೆ, ದಿನ ಕಳೆದಂತೆ ತನ್ನ ಸ್ನೇಹಿತನ ತಂಗಿಯನ್ನೇ ಪ್ರೀತಿಸತೊಡಗಿದ್ದ ಸಂದೀಪ್ ಎಂಬಾತ..! ಇದನ್ನರಿತ ಹುಡುಗಿಯ ಅಣ್ಣ, ಸಂದೀಪ್ ನ ಪರಮಾಪ್ತ ಪವನ್ ತನ್ನ ತಂಗಿಯ ತಂಟೆಗೆ ಬರದಂತೆ ವಾರ್ನಿಂಗ್ ಕೊಟ್ಟಿದ್ದ. ಇದನ್ನೇ ಮುಂದಿಟ್ಟುಕೊಂಡು ಸಾರ್ವಜನಿಕರ ಮುಂದೆಯೇ ಸ್ನೇಹಿತ ಪವನ್ ನನ್ನು ಲಾಂಗು ಮಚ್ಚುಗಳಿಂದ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಸಂದೀಪ್, ಮಂಜು, ಉದಯ್, ಹೇಮಂತ್ ಇವರೆಲ್ಲಾ ದೊಡ್ಡಬಳ್ಳಾಪುರದವರು. ಕಂಪನಿಯೊಂದರಲ್ಲಿ ಚಾಲಕ ಹಾಗೂ ಇತರೆ ಕೆಲಸ ಮಾಡಿಕೊಂಡಿದ್ದರು. ಮಚ್ಚಾ, ಮಗಾ, ಬಾಮೈದಾ ಅಂತ ಗ್ಯಾಂಗ್ ಕಟ್ಟಿಕೊಂಡು ಹವಾ ತೋರಿಸಲು ಹೋಗಿ ಜೊತೆಯಲ್ಲಿದ್ದವನಿಗೆ ಚಟ್ಟ ಕಟ್ಟಿ ಇದೀಗ ಸೆರೆಮನೆ ಸೇರಿದ್ದಾರೆ. ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್ ಠಾಣೆಯಿಂದ ಮುನ್ನೂರು ಮೀಟರ್ ದೂರದಲ್ಲೇ ಈ ಕಿರಾತಕರು ಡಿ.4ರಂದು ಪವನ್ ಎನ್ನುವ ತಮ್ಮ ಗೆಳೆಯನನ್ನೇ ನಡು ರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಪಾಕ್ಸ್‌ಕಾನ್ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪವನ್, ಇತ್ತೀಚೆಗೆ ಕೆಲಸ ಬಿಟ್ಟು ಆಟೋ ಓಡಿಸಿಕೊಂಡಿದ್ದ.

ಡಿ. 4ರಂದು ರಾತ್ರಿ 9 ಗಂಟೆ ಸುಮಾರಿಗೆ ಆಟೋದಲ್ಲಿ ಒಬ್ಬನೇ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ, ಐದು ಜನರು ಪವನ್‌ನನ್ನ ಅಡ್ಡಗಟ್ಟಿ ಸಾರ್ವಜನಿಕರ ಮುಂದೆಯೇ ಲಾಗು, ಮಚ್ಚುಗಳಿಂದ ಅಟ್ಯಾಕ್ ಮಾಡಿ ಹತ್ಯೆಗೈದಿದ್ದರು.
ಇತ್ತ ಮನೆಗೆ ಆಧಾರವಾಗಿದ್ದ ಒಬ್ಬನೇ ಮಗನನ್ನ ಕಳೆದುಕೊಂಡ ತಾಯಿ ಹಾಗೂ ಕುಟುಂಬಸ್ಥರು ಮಗನ ಸಾವಿಗೆ ನ್ಯಾಯ ಕೊಡುವಂತೆ ಅಂಗಲಾಚುತ್ತಿದ್ದಾರೆ. ಅಲ್ಲದೆ ಲವ್ ವಿಚಾರಕ್ಕೆ ನನ್ನ ಮಗನನ್ನ ಕಿರಾತಕರು ಬರ್ಬರವಾಗಿ ರಸ್ತೆ ಮಧ್ಯೆಯೇ ಹತ್ಯೆ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ನಡು ರಸ್ತೆಯಲ್ಲಿ ನಡೆದಿದ್ದ ಈ ಕೊಲೆಯನ್ನ ಗಂಭೀರವಾಗಿ ಪರಿಗಣಿಸಿದ್ದ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು, ಇದೀಗ ಹತ್ಯೆಗೈದಿದ್ದ ಓರ್ವ ಅಪ್ರಾಪ್ತ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಪವನ್‌ನ ಸ್ನೇಹಿತನ ತಂಗಿ ಜೊತೆಗೆ ಸಂದೀಪ್ ಸಂಬಂಧ ಹೊಂದಿದ್ದು, ಅದೊಂದು ದಿನ ಆಕೆಯ ಜೊತೆ ಮನೆಯಲ್ಲಿ ಸಿಕ್ಕಿಬಿದ್ದಿದ್ದ. ಈ ಕಾರಣಕ್ಕೆ ಪವನ್, ಸಂದೀಪನಿಗೆ ಥಳಿಸಿದ್ದ. ಅಷ್ಟೇ ಅಲ್ಲದೆ ಹೀಗೆ ಮುಂದುವರೆದರೆ ಕಥೆ ಮುಗಿಸುವುದಾಗಿ ವಾರ್ನಿಂಗ್ ಕೂಡ ನೀಡಿದ್ದನಂತೆ.
ಈ ಘಟನೆಯಿಂದ ಪವನ್ ಮೇಲೆ ಸಂದೀಪ್‌ನಿಗೆ ದ್ವೇಷ ಬೆಳೆದಿದ್ದು, ನನಗೆ ವಾರ್ನಿಂಗ್ ಕೊಡುತ್ತಾನೆ ಅಂತ ತನ್ನ ಸ್ನೇಹಿತರ ಜೊತೆಗೂಡಿ ಆಟೋದಲ್ಲಿ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಗಟ್ಟಿ ಕೊಲೆ ಮಾಡಿರುವುದಾಗಿ ಆರೋಪಿಗಳು ಪೊಲೀಸರ ತನಿಖೆ ವೇಳೆ ಬಾಯ್ದಿಟ್ಟಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.