ಬೆಳ್ತಂಗಡಿ : ಮುಸ್ತಾಕ್ ಸಾವಿನ ವಿಚಾರದಲ್ಲಿ ಹೊಸ ತಿರುವು – ಅಲ್ಯೂಮಿನಿಯಂ ವಯರ್ ಬಂಡಲ್ ಗಳು ಕಳವು ಕೃತ್ಯ ಬೆಳಕಿಗೆ !

ಬೆಳ್ತಂಗಡಿ, ಜು. 13 :  ಜುಲೈ 01 ರಂದು ಮುಸ್ತಾಕ್(27)ಎಂಬವರ ಸಾವು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ 01-07-2026 ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್‌ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯರ್‌ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 35/2026 ರಂತೆ ಪ್ರಕರಣ ದಾಖಲಾಗಿತ್ತು.

ಬಳಿಕ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿ ಹೆಸರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ ನಿವಾಸಿ ಮುಸ್ತಾಕ್(27) ಎಂಬುದಾಗಿ ತಿಳಿದುಬಂದಿದ್ದು, ಪ್ರಕರಣದಲ್ಲಿ ಮೃತಪಟ್ಟ ಮುಸ್ತಾಕ್ ನ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ವಯರ್ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ತಮ್ಮ ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ಇರಿಸಿದ ಅಲ್ಯೂಮಿನಿಯಂ ವಯರ್ ಬಂಡಲ್ ಗಳು, ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದು ತಿಳಿದು ಈ ವಿಚಾರ ಮೇಲಾಧಿಕಾರಿಗಳಿಗೆ ತಿಳಿಸಿದ ಬಳಿಕ ಮೇಲಾಧಿಕಾರಿಗಳು ಬಂದು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಮೌಲ್ಯ ಸುಮಾರು 1100 ಕೆಜಿಯಷ್ಟು ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದಾಗಿ ಎಸ್. ಎಲ್. ವಿ ಇ ಪವ‌ರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಮ್ಯಾನೇಜ‌ರ್ ಆಗಿರುವ ರಾಜೇಂದ್ರನ್(50) ಎಂಬವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿ, ಮೃತಪಟ್ಟ ಮುಸ್ತಾಕ್ ಮತ್ತು ಇತರರ ವಿರುದ್ಧ ಕಲಂ: 331(4), 305 ಜೊತೆಗೆ 3(5)ಬಿ. ಎನ್ ಎಸ್ ಯಂತೆ ಜು.11 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.