ಮೈಸೂರು : ಶ್ರೀ ಗಣೇಶ ಭಜನಾ ಮಂದಿರ (ರಿ.), ಕುಪ್ಪೆಟ್ಟಿ ಇಲ್ಲಿನ ನೂತನ ರಾಜಗೋಪುರ ಲೋಕಾರ್ಪಣೆ – ಅತಿಥಿಯಾಗಿ ಮೈಸೂರು ಮಹಾರಾಜರಿಗೆ ಆಹ್ವಾನ

ಮೈಸೂರು : ಶ್ರೀ ಗಣೇಶ ಭಜನಾ ಮಂದಿರ (ರಿ.), ಕುಪ್ಪೆಟ್ಟಿ ಇಲ್ಲಿನ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ, ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿಸೆಂಬರ್ 06, 07 ಹಾಗೂ 08ರಂದು ವೈಭವದಿಂದ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜರನ್ನು ಭಜನಾ ಮಂದಿರದ ಆಡಳಿತ ಮಂಡಳಿಯವರು ಭೇಟಿ ಮಾಡಿ, ಆಮಂತ್ರಣ ಪತ್ರ ನೀಡಿ, ಆಹ್ವಾನಿಸಲಾಯಿತು.

Advertisement

ಡಿಸೆಂಬರ್ 07ರಂದು ಸಂಜೆ ಗಂಟೆ 04:00ರಿಂದ ಜಿಲ್ಲೆಯ ಪ್ರತಿಷ್ಠಿತ ಕಲಾ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಪಿಲಿನಲಿಕೆ, ಕೌಡಲ ತೈಯ್ಯಂ, ಟ್ಯಾಬ್ಲೋ, ಚೆಂಡೆ, ವಾಲಗ, ಕೊಂಬು ಹಾಗೂ ಭಜನಾ ತಂಡಗಳೊಂದಿಗೆ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜರು, ಮಹಾಸಂಸ್ಥಾನಮ್ ಅವರನ್ನು ಯತಿವರ್ಯರೊಂದಿಗೆ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ವೈಭವದ ಮೆರವಣಿಗೆ ನಡೆಯಲಿದೆ. ಸಂಜೆ 05:30 ಗಂಟೆಗೆ ನೂತನ ರಾಜಗೋಪುರದ ಲೋಕಾರ್ಪಣೆ, ಶ್ರೀ ದುರ್ಗಾ ಗಣಪತಿ ಸಭಾಭವನ ಲೋಕಾರ್ಪಣೆಗೊಳ್ಳಲಿದೆ. ಸಂಜೆ 06:00 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.