ಕುಪ್ಪೆಟ್ಟಿ ಡಿ.08 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುದ ಲೋಕಾರ್ಪಣೆಗೊಳಿಸಲು ಆಗಮಿಸಿದ ಮೈಸೂರು ಸಂಸ್ಥಾನ ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭವ್ಯ ಮೆರವಣಿಗೆಯಲ್ಲಿ ಮಂದಿರಕ್ಕೆ ಕರೆತರಲಾಯಿತು.

ಕಲ್ಲೇರಿ ಮಹಾದ್ವಾರದಿಂದ ಜಿಲ್ಲೆಯ ವಿವಿಧ, ಪ್ರತಿಷ್ಠಿತ ಕಲಾ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಪಿಲಿನಲಿಕೆ, ಕೌಡಲ ತೈಯ್ಯಂ, ಟ್ಯಾಬ್ಲೋ, ಚೆಂಡೆ, ವಾಲಗ, ಕೊಂಬು ಹಾಗೂ ಭಜನಾ ತಂಡಗಳೊಂದಿಗೆ ಯತಿವರ್ಯರೊಂದಿಗೆ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ವೈಭವದ ಮೆರವಣಿಗೆ ನಡೆಯಿತು.


