ಬೆಳ್ತಂಗಡಿ : ನಡ ಭಾಗದಲ್ಲಿ ಪ್ರತ್ಯಕ್ಷವಾದ ಚಿರತೆ – ಜನರಲ್ಲಿ ಆತಂಕ

ನಡ, ಜ. 19 : ಕಳೆದ ಹಲವಾರು ದಿನಗಳಿಂದ ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದೆ. ಗ್ರಾಮೀಣ ಪ್ರದೇಶದ ಜನತೆ ಹಗಲಿನಲ್ಲೂ ರಸ್ತೆಯಲ್ಲಿ ನಡೆದಾಡುವುದಕ್ಕೆ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಮೂರು ದಿನಗಳ ಹಿಂದೆಯಷ್ಟೇ ಕೃಷಿಕರೋರ್ವರ ಮೇಲೆ ಚಿರತೆ ದಾಳಿ ನಡೆದಿದ್ದ, ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ. ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ಕೂಡಾ ನಡೆದಿದೆ.

ಮಲವಂತಿಗೆ ಗ್ರಾಮದ ದಿಡುಪ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ ಎನ್ನಲಾಗಿದೆ. ಅಲ್ಲದೆ, ಕಲ್ಮಂಜ ಗ್ರಾಮದ ಇರ್ನಾಡಿ, ಕೊತ್ತಳಿಗೆ ಭಾಗದಲ್ಲಿ ಕೂಡಾ ಚಿರತೆ ಕಂಡು ಬಂದಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ, ಸಾರ್ವಜನಿಕರು ಚಿರತೆ ಕಾಟದಿಂದಾಗಿ ಭಯಭೀತರಾಗಿದ್ದು, ಹಗಲಿನಲ್ಲೂ ಮನೆಯಿಂದ ಹೊರ ಬರಲಾರದ ಸ್ಥಿತಿ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯು ಕೂಡಾ ಆದಷ್ಟು ಶೀಘ್ರವೇ ಚಿರತೆ ಕಾಟದಿಂದ ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಗರಿಷ್ಠ ತಾಪಮಾನ – ಸೂರ್ಯಾಘಾತಕ್ಕೆ ಒಳಗಾದ ಬಾಲಕನ ದೇಹದಲ್ಲಿ ಸುಟ್ಟ ಗಾಯ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

⚠️ Contents are protected on this website.