ಮಂಗಳೂರು: ನಾಗುರಿ ದುರಂತಕ್ಕೆ ಸಂತಾಪ ಸೂಚಿಸಿದ ಶಾಸಕ ವೇದವ್ಯಾಸ ಕಾಮತ್ – ಘಟನಾ ಸ್ಥಳ, ಆಸ್ಪತ್ರೆಗೆ ಭೇಟಿ !

ಮಂಗಳೂರು,ಜು. 1 : ನಗರದಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯ ಕಾರಣಕ್ಕೆ ಕಂಕನಾಡಿ ಸಮೀಪ ನಾಗುರಿ ಗರೋಡಿಯಲ್ಲಿ ತಡೆಗೋಡೆ ಕುಸಿದು ಮನೆಯೊಂದರ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳು ಅಸುನೀಗಿರುವುದು ಹೃದಯ ವಿದ್ರಾವಕ ಘಟನೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

Advertisement

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರ ಲಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಹವಾಮಾನ ಇಲಾಖೆಯ ಪ್ರಕಾರ ಮಳೆಯ ಪ್ರಮಾಣ ಇನ್ನೂ ಮುಂದುವರಿಯಲಿದ್ದು ಈಗಾಗಲೇ ಅಪಾಯಕಾರಿ ಎಂದು ಗುರುತಿಸಲಾಗಿರುವ ಪ್ರದೇಶಗಳಲ್ಲಿ ವಾಸಿಸುವ ಜನರ ಬಗ್ಗೆ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಹೇಳಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.