ಝೆನ್ ಜಿ ಪ್ರತಿಭಟನೆ ಸಂಬಂಧ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅರೆಸ್ಟ್

ಕಠ್ಮಂಡು, ಮಾ. 28 : ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಲಾಗಿದೆ.

Advertisement

ಕಳೆದ ವರ್ಷ ನಡೆದಿದ್ದ ಝೆನ್ ಜಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಓಲಿ ಹಾಗೂ ಲೇಖಕ್ ಅವರನ್ನ ಬಂಧಿಸಲಾಗಿದೆ. ಬಾಲೇಂದ್ರ ಶಾ ಅವರು ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇವರಿಬ್ಬರನ್ನು ಬಂಧಿಸಲಾಗಿದೆ.

ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚಂದ್ರ ಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ.

ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂದು ಹಾಲಿ ಗೃಹಸಚಿವ ಸುಡಾನ್ ಗುರುಂಗ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.