ಬೆಳ್ತಂಗಡಿ : ತುಂಬಿ ಹರಿಯುತ್ತಿರುವ ನೇತ್ರಾವತಿ ನದಿ – ಇರಲಿ ಎಚ್ಚರ !

ಬೆಳ್ತಂಗಡಿ, ಜು. 7 : ತಾಲೂಕಿನಲ್ಲಿ ಹರಿಯುತ್ತಿರುವ ಜೀವನದಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕೆಲವು ಭಾಗದಲ್ಲಿ ತೋಟ ಪ್ರದೇಶ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಧಾರಕಾರವಾಗಿ ಸುರಿಯುತ್ತಿದ್ದು, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿಯೂ ಧಾರಕಾರ ಮಳೆಯಾಗುತ್ತಿದ್ದು, ಚಾರ್ಮಾಡಿ ಭಾಗದಲ್ಲಿಯೂ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಹೀಗಾಗಿ ನದಿ ತೀರದಲ್ಲಿ ಸಂಚರಿಸುವಂತಹ ಅಥವಾ ನದಿಗೆ ಇಳಿಯುವಂತಹ ದುಸ್ಸಾಹಸ ಸಾರ್ವಜನಿಕರು ಮಾಡಬಾರದು. ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ನದಿ ತೀರದ ನಾಗರಿಕರು ಎಚ್ಚರಿಕೆ ವಹಿಸುವುದು ಸೂಕ್ತ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.