ಉಡುಪಿ : ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದ ಸ್ಥಳೀಯರು

ಉಡುಪಿ, ಏ. 15 : ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು.

ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ ಕೊರತೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅಪಘಾತಗಳು ಸಂಭವಿಸಿ ಹಲವರು ಗಾಯಗೊಂಡಿದ್ದು, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರವೂ ಕಾರೊಂದು ಅಪಘಾತಕ್ಕೀಡಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಸಾರ್ವಜನಿಕರ ಮನವಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆ ಆಕ್ರೋಶಗೊಂಡ ಗ್ರಾಮಸ್ಥರು ಟಿಪ್ಪರ್ ಲಾರಿಗಳ ಮೂಲಕ ಮಣ್ಣು ತರಿಸಿ ಹೆದ್ದಾರಿಯ ಮೇಲೆ ಸುರಿದು ಸಂಚಾರ ತಡೆದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಪ್ರತಿಭಟನೆಗಳ ಮೂಲಕವಾದರೂ ಅಧಿಕಾರಿಗಳ ಗಮನ ಸೆಳೆಯಬೇಕು, ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.