ಕಲ್ಮಂಜ, ಡಿ. 05 : ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭನೆಯ ಪ್ರತಿಷ್ಠಾಪನೆಯು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಪ್ರಸಾದ್ ಮುನಿಯಂಗಳರವರ ವಾಸ್ತುಶಿಲ್ಪ ಶಾಸ್ತ್ರದ ಪ್ರಕಾರ ವಿವಿಧ ವೈದಿಕ ಕಾರ್ಯಕ್ರಮಗಳ ಮೂಲಕ ಪ್ರತಿಷ್ಠಾಪನೆ ನಡೆಯಿತು.

ಶ್ರೀ ಕ್ಷೇತ್ರಕ್ಕೆ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಸ್ವಾಮೀಜಿ ಭೇಟಿ ನೀಡಿದರು.


ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಿರುವ ನೂತನ ಶಿಲಾಮಯ ಧ್ವಜಸ್ಥಂಭವನ್ನು ಉಜಿರೆಯಿಂದ ಡಿ. 04ರಂದು ಭವ್ಯವಾದ ಮೆರವಣಿಗೆ ಮೂಲಕ ತರಲಾಗಿತ್ತು.


