ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕಕ್ಕೆ ನೂತನ ಧ್ವಜಸ್ತಂಭ ಲೋಕಾರ್ಪಣೆ – ಡಿ.04 ರಂದು ಉಜಿರೆಯಿಂದ ಭವ್ಯ ಶೋಭಾಯಾತ್ರೆ

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ. 05 ರಂದು ಶ್ರೀ ಕ್ಷೇತ್ರ ಪಜಿರಡ್ಕದಲ್ಲಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ಕೃತಿ ಮಹಾರಾಜರವರ ದಿವ್ಯ ಸಾನಿಧ್ಯ ದೊಂದಿಗೆ ಧ್ವಜಸ್ತಂಬದ ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

Advertisement

ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃವಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.04 ರಂದು ಉಜಿರೆಗೆ ತಲುಪಲಿದೆ. ಉಜಿರೆಯಲ್ಲಿ 3.00 ಗಂಟೆಗೆ ವಿವಿಧ ಗಣ್ಯರು ಸ್ವಾಗತಿಸಿ ಚಾಲನೆ ನೀಡಿ ಭವ್ಯ ಶೋಭಾ ಯಾತ್ರೆಯೊಂದಿಗೆ ಧರ್ಮಸ್ಥಳ ಮುಂಡ್ರುಪ್ಪಾಡಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತಲುಪಲಿದೆ.

ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಶರತ್ ಕೃಷ್ಣ ಪಡುವೆಟನ್ನಾಯ, ಎಸ್ ಡಿ. ಎಂ ಶಿಕ್ಷಣ ಸಂಸ್ಥೆ ಗಳ ಕಾರ್ಯದರ್ಶಿ ಎಸ್. ಸತೀಶ್ಚಂದ್ರ, ಉಜಿರೆ ಲಕ್ಷ್ಮೀ ಗ್ರೂಪ್ ಕೆ. ಮೋಹನ್ ಕುಮಾರ್, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಉಜಿರೆ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ಉದ್ಯಮಿ ಮೋಹನ್ ಶೆಟ್ಟಿಗಾರ ಭಾಗವಹಿಸಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.