ಉಜಿರೆ, ಆ. 15 : ವಿಶ್ವ ಹಿಂದೂ ಪರಿಷದ್, ಬಜರಂಗದಳ,ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಉಜಿರೆ ಪೇಟೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಯಿತು. ನಿವೃತ್ತ ಯೋಧರು ಮೇಜರ್ ಜನರಲ್ ಎಂ ವಿ ಭಟ್ ಮುಂಡಾಜೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿದ್ದರು.

ಶಾರದ ಮಂಟಪದಲ್ಲಿ ಸಭಾ ಕಾರ್ಯಕ್ರಮ ನೆರವೇರಿತು. ವಿಶ್ವ ಹಿಂದೂ ಪರಿಷದ್ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖ್ ಪ್ರದೀಪ್ ಸರಿಪಳ್ಳ ದಿಕ್ಕೂಚಿ ಭಾಷಣ ಭಾಷಣಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ ವಹಿಸಿದ್ದರು. ಉದ್ಯಮಿಗಳಾದ ಪದ್ಮನಾಭ ಶೆಟ್ಟಿಗಾರ್ ಪದ್ಮಶ್ರೀ ಉಜಿರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಇನ್ನು, ಕಾರ್ಯಕ್ರಮದಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.




