ಉಡುಪಿ : ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳ – ಮಗಳೊಂದಿಗೆ ನಾಪತ್ತೆಯಾದ ಪತ್ನಿ !

ಉಡುಪಿ, ಮಾ. 25 : ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ ತನ್ನ ಅಪ್ರಾಪ್ತ ಮಗಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಮಾರ್ಚ್ 20ರಂದು ಬೆಳಪು ಗ್ರಾಮದ ಪುಂಚಲಕಾಡಿನಲ್ಲಿ ನಡೆದಿದೆ.

Advertisement

ಕಾಣೆಯಾದವರನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ಪುಂಚಲಕಾಡು ನಿವಾಸಿ ರೇಣುಕಾ ಗಂಗಾಧರ್ ಪೂಜೇರ್(28) ಹಾಗೂ ಪುತ್ರಿ ಪ್ರತೀಕ್ಷಾ ಗಂಗಾಧರ್ ಪೂಜೇರ್(11) ಎಂದು ಗುರುತಿಸಲಾಗಿದೆ.

ಮಾರ್ಚ್ 20ರ ಮಧ್ಯಾಹ್ನ ಊಟದ ವಿಚಾರವಾಗಿ ಪತಿ ಗಂಗಾಧರ್ ಮತ್ತು ರೇಣುಕಾ ನಡುವೆ ಸಣ್ಣ ಮಟ್ಟದ ಮಾತಿನ ಚಕಮಕಿ ನಡೆದಿದೆ. ಜಗಳದ ನಂತರ ಗಂಗಾಧರ್ ಕೆಲಸಕ್ಕೆ ತೆರಳಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ರೇಣುಕಾ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯಲ್ಲೇ ಬಿಟ್ಟು, ಮಗಳೊಂದಿಗೆ ನಾಪತ್ತೆಯಾಗಿದ್ದಾರೆ.

ಪತಿ ಗಂಗಾಧರ್ ಅವರು ಎಲ್ಲೆಡೆ ಹುಡುಕಾಟ ನಡೆಸಿದರೂ ಪತ್ನಿ-ಮಗಳ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.