ಕಾರ್ಕಳ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆಗೈದ ಪತಿ !

Advertisement

ಕಾರ್ಕಳ, ಫೆ. 03 : ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಪತಿಯು ಮಾರಾಕಾಸ್ತ್ರದಿಂದ ಹಲ್ಲೆಮಾಡಿ ಕೊಲೆಗೈದ ಘಟನೆ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ಎಂಬಲ್ಲಿ ನಡೆದಿದೆ. ಆರೋಪಿ ಸುನೀಲ್ ಕುಮಾರ್ (44) ಎಂಬಾತನನ್ನು ಬಂಧಿಸಲಾಗಿದೆ.

Advertisement

ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಶ್ರೀಮತಿ ಗೀತಾ ಮತ್ತು ಅವರ ಗಂಡ ಸುನೀಲ್ ಕುಮಾರ್ ಇವರ ಮಧ್ಯೆ ಜ.27 ರಂದು ಬೆಳಗ್ಗೆ 9:50 ಗಂಟೆ ಸುಮಾರಿಗೆ ಗಲಾಟೆ ನಡೆದಿದ್ದು ಸುನೀಲ್ ಕುಮಾರ್ ಪತ್ನಿ ಗೀತಾ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದ.

Advertisement

ಗಂಭೀರ ಗಾಯಗೊಂಡಿದ್ದ ಗೀತಾ ಇವರು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಇಲ್ಲಿ ತೀವೃ ನಿಗಾ ಘಟಕದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಸುನೀಲ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಗಾಯಾಳು ಗೀತಾ ಚಿಕಿತ್ಸೆಗೆ ಸ್ಪಂದಿಸದೇ ಫೆ.02 ರಂದು ಮೃತಪಟ್ಟಿದ್ದಾರೆ. ಠಾಣೆಯಲ್ಲಿ ಈಗಾಗಲೇ ದಾಖಲಾದ ಕೊಲೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ಪ್ರಕರಣದ ಕಾನೂನು ಕಲಂ 109 ಅನ್ನು 103(1) ಭಾರತೀಯ ನ್ಯಾಯ ಸಂಹಿತೆ 2023 ನಂತೆ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ