ಬಜ್ಪೆ : ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಅವಹೇಳನ ಆರೋಪ – ಆರೋಪಿಯ ಬಂಧನ

Advertisement

ಬಜ್ಪೆ ಡಿ. 19 : ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಆರೋಪಿಯು mr_a_titude 22 ಎಂಬ Instagram ಪೇಜ್ ನಲ್ಲಿ ಬಜ್ಪೆ ನಿಸರ್ಗ ಹೋಟೆಲ್‌ನ ಫೋಟೊ ಬಳಸಿಕೊಂಡು ಅದರ ಮೇಲೆ “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜ್ಪೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಪೆಯಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್ ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ” ಎಂದು ಪೊಲೀಸರನ್ನು ನಿಂದಿಸಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಜ್ಪೆ ಪೊಲೀಸರು ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.

Advertisement

ಅಭಿಷೇಕ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ, ಕೊಲೆಯತ್ನ, ಹಲ್ಲೆ ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆಗಾಗಿ ಸೆನ್ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ