ಧರ್ಮಪುರಿ, ಡಿ. 08 : ಪ್ರತಿಭಟನೆಯ ಸಂದರ್ಭದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಪ್ರತಿಭಟನಾ ನಿರತ ವ್ಯಕ್ತಿಯೋರ್ವ ಕಚ್ಚಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಪ್ರತಿಭಟನೆಯ ವೇಳೆ ನಡೆದಿದೆ. ಈ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಹೊಸದಾಗಿ ಆರಂಭವಾದ ಮದ್ಯದ ಅಂಗಡಿಯನ್ನು ಮುಚ್ಚುವಂತೆ ಆಗ್ರಹಿಸಿ ಟಿವಿಕೆ ಪಕ್ಷದ ಕಾರ್ಯಕರ್ತರು ಧರ್ಮಪುರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ತಡೆಯಲು ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ತೊಡಗಿದ್ದಾಗ, ಜೆಮಿನಿ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಪೊಲೀಸ್ ಅಧಿಕಾರಿಯ ಕೈಗೆ ಕಚ್ಚಿದ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಜೆಮಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕರ್ತವ್ಯನಿರತ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದಡಿ ಮತ್ತೂ ಮೂವರು ಪ್ರತಿಭಟನಾನಿರತರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

