ಮಂಗಳೂರು : ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

ಮಂಗಳೂರು, ಮೇ. 26 : ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಉರ್ವ ಠಾಣೆ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಬಳಿ ಶನಿವಾರ ತಡರಾತ್ರಿ ಎರಡು ಗಂಟೆ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement

ಸ್ಥಳದಲ್ಲಿ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿರತರಾಗಿದ್ದ ವೇಳೆ ಇಬ್ಬರು ಯುವಕರು ದ್ವಿಚಕ್ರ ವಾಹನವೊಂದರಲ್ಲಿ ಅತಿ ವೇಗವಾಗಿ ತೆರಳಿದ್ದರು. ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಲೆಕ್ಕಿಸದೆ ಸಾಗಿದ್ದರು. ಆನಂತರ ಅದೇ ಮಾರ್ಗದಲ್ಲಿ ಬಂದ ಯುವಕರು ಸಿಮೆಂಟ್ ಶೀಟ್‌ನ ತುಂಡನ್ನು ಹಿಡಿದು ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಮೇಲೆ ನೇರವಾಗಿ ಹೊಡೆದು ಪರಾರಿಯಾಗಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಹನುಮಂತ ಕಂಠಿ ಎಂಬವರು ಏಟಿನಿಂದ ತಪ್ಪಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಹಲ್ಲೆಯಿಂದ ಪಾರಾಗಿದ್ದಾರೆ. ಆದರೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಉರ್ವಾ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.