ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು : ಹರೀಶ್ ಪೂಂಜ

ಬೆಳ್ತಂಗಡಿ, ಜ.07 : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ವಿಶೇಷ ಮುತುವರ್ಜಿ ವಹಿಸಿ, ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿ ತಲಾ ರೂ.25.00 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ ಎಂದು ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ.

Advertisement

ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ, ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ಅನುದಾನ ಮುಂಜೂರುಗೊಂಡಿದೆ. ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಅರಣ್ಯದಂಚಿನ ಜನರಿಗೆ ಮೂಲಭೂತ ಸೌಕರ್ಯಕ್ಕೆ ಶಾಸಕ ಹರೀಶ್ ಪೂಂಜಾ ಮನವಿ

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವದಂತಿಗೆ ನಿಜವೇ ? – ಪ್ರಮೋದ್ ಮಧ್ವರಾಜ್ ಸ್ಪಷ್ಟನೆಯೇನು ನೋಡಿ

⚠️ Contents are protected on this website.