ಬೆಳ್ತಂಗಡಿ : ಸುಮಂತ್ ಕೊಲೆ ಪ್ರಕರಣದ ಕೂಲಂಕುಷ ತನಿಖೆಗೆ ಗೃಹ ಸಚಿವರನ್ನು ಆಗ್ರಹಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಜ. 28 : ಕುವೆಟ್ಟು ಗ್ರಾಮದ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಮಾನ್ಯ ಗೃಹ ಸಚಿವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಗ್ರಹಿಸಿದ್ದಾರೆ.

ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪೊಲೀಸ್‌ ಇಲಾಖೆ ನಿರಪೇಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂಬ ನಿರೀಕ್ಷೆ ವ್ಯಕ್ತವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರ ಮಾರ್ಗದರ್ಶನದ ಪೊಲೀಸರ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.