ಬೆಳ್ತಂಗಡಿ, ಜೂ. 13 : ಅರಣ್ಯ, ಅರಣ್ಯದಂಚಿನ ಬುಡಕಟ್ಟು ಸಮುದಾಯದ ಕಾಲೋನಿಗಳ ಮೂಲಭೂತ ಸೌಕರ್ಯ, ವಿದ್ಯುತ್ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜಾ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾರಾವಿ, ಕುತ್ಲೂರು, ಸುಲ್ಕೇರಿ, ಸವಣಾಲು ,ನಡ, ಮಲವಂತಿಗೆ, ನವೂರು ಗ್ರಾಮದ ಮಲೆಕುಡಿಯ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿವೇಶ್ ಪೋರ್ಟಲ್ ನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಸರ್ಕಾರದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಜುಮ್ ಪರ್ವೇಜ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಹಾಗೂ ರಾಜ್ಯಾದ್ಯಂತ ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಾಗ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3(2) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ , ಫಾರೆಸ್ಟ್ ಕ್ಲಿಯರೆನ್ಸ್ ಮತ್ತು ವನ್ಯ ಮಂಡಳಿಯ ಅನುಮತಿ ಇಲ್ಲದೆ DFO ಹಂತದಲ್ಲಿ ಅನುಮತಿ ನೀಡಲು ಕೇಂದ್ರ ಸರ್ಕಾರದ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಲು ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯವರಾದ ಕನಗವಲ್ಲಿಯ ವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಲೆಕುಡಿಯ ಸಮುದಾಯದ ಮುಖಂಡರಾದ ಹರೀಶ್ ಎಳನೀರು ಅವರು ಉಪಸ್ಥಿತರಿದ್ದರು.


