ಚಿಕ್ಕಬಳ್ಳಾಪುರ : ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ !

ಚಿಕ್ಕಬಳ್ಳಾಪುರ, ಜೂ. 27 : ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.

Advertisement

ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮಕ್ಕೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು.

ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್​ ರೂಫ್​​​​ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.