ಪುತ್ತೂರು, ಸೆ. 05 : ‘ಪುತ್ತೂರು ಚಲೋ’ ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಯಕ್ರಮ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಮಾನವ ಬಂಧುತ್ವ ವೇದಿಕೆಯ ಪ್ರಧಾನ ಸಂಚಾಲಕ ಅಮಳ ರಾಮಚಂದ್ರ ಅವರು ಈ ದೂರನ್ನು ದಾಖಲಿಸಿದ್ದಾರೆ.




