ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಅಲಹಾಬಾದ್, ಏ. 18 : ದ್ವಿಪೌರತ್ವದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹಾಗೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

Advertisement

ಉತ್ತರ ಪ್ರದೇಶ ಸರ್ಕಾರವು ಈ ಪ್ರಕರಣದ ಬಗ್ಗೆ ಸ್ವತಃ ತನಿಖೆ ನಡೆಸಬೇಕು ಅಥವಾ ಈ ವಿಷಯವನ್ನು ಕೇಂದ್ರೀಯ ಸಂಸ್ಥೆಗೆ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್‌ನ ಲಕ್ನೋ ಪೀಠ ನಿರ್ದೇಶಿಸಿದೆ.

ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು.

ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ ಸರಿಯಾದ ಪರಿಶೀಲನೆಯ ಅಗತ್ಯವಿದೆ ಎಂದು ಹೇಳಿದೆ. ಕಾನೂನಿನ ಪ್ರಕಾರ ಈ ವಿಷಯವನ್ನು ಪರಿಶೀಲಿಸುವಂತೆ ರಾಜ್ಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?:

ಈ ಪ್ರಕರಣವು ರಾಹುಲ್ ಗಾಂಧಿ ಬ್ರಿಟಿಷ್ ಪೌರತ್ವ ಹೊಂದಿರಬಹುದು ಎಂಬ ಆರೋಪಗಳಿಗೆ ಸಂಬಂಧಿಸಿದೆ. ಭಾರತೀಯ ಕಾನೂನಿನಡಿಯಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ. ಇಂಗ್ಲೆಂಡ್ ಮೂಲದ ಕಂಪನಿಗೆ ಸಂಬಂಧಿಸಿದ ದಾಖಲೆಗಳನ್ನು ಉಲ್ಲೇಖಿಸಿ ದೂರು ನೀಡಲಾಗಿದೆ. ಅಲ್ಲಿ ಅವರನ್ನು ಬ್ರಿಟಿಷ್ ಪ್ರಜೆ ಎಂದು ಉಲ್ಲೇಖಿಸಲಾಗಿದೆ. ಅವರ ಅಧಿಕೃತ ದಾಖಲಾತಿಗಳಲ್ಲಿ ಲಂಡನ್ ವಿಳಾಸವನ್ನು ಕೂಡ ಪಟ್ಟಿ ಮಾಡಲಾಗಿದೆ. ಪೌರತ್ವ, ಪಾಸ್‌ಪೋರ್ಟ್‌ಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಾನೂನುಗಳು ಸೇರಿದಂತೆ ವಿವಿಧ ಕಾನೂನು ನಿಬಂಧನೆಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ವಿವರವಾದ ತನಿಖೆಗಾಗಿ ಅರ್ಜಿ ಸಲ್ಲಿಸಲಾಗಿತ್ತು.

ಕರ್ನಾಟಕದ ನಿವಾಸಿಯಾಗಿರುವ ಅರ್ಜಿದಾರರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಅಧಿಕೃತ ರಹಸ್ಯ ಕಾಯ್ದೆ, ವಿದೇಶಿಯರ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಿ ಎಫ್‌ಐಆರ್ ದಾಖಲಿಸಿ ವಿವರವಾದ ತನಿಖೆ ನಡೆಸುವಂತೆ ಕೋರಿದ್ದಾರೆ. ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಸಾಬೀತುಪಡಿಸುವ ದಾಖಲೆಗಳು ಮತ್ತು ಬ್ರಿಟಿಷ್ ಸರ್ಕಾರದ ಕೆಲವು ಇಮೇಲ್‌ಗಳು ತಮ್ಮ ಬಳಿ ಇವೆ. ಈ ಕಾರಣದಿಂದಾಗಿ ಅವರು ಭಾರತದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು. ಅವರು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.