ಬೆಳ್ತಂಗಡಿ : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಬೆಳಾಲು, ಡಿ. 30 : ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆ.

Advertisement

ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.