ಬೆಳ್ತಂಗಡಿ, ಡಿ. 09 : ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟು ಮೊಗ್ರು ಗ್ರಾಮ ದಂಡುಗ ನಿವಾಸಿ ಕು.ರಕ್ಷಿತಾ ಜೆ.ಎಸ್ ಇವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಾಧನಾ ಶ್ರೀ ಪ್ರಶಸ್ತಿ ಲಭಿಸಿದೆ. ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಕು.ರಕ್ಷಿತಾ ಜೆ.ಎಸ್ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ದಿ.ಜನಾರ್ದನ ಗೌಡ ಮತ್ತು ಶೀಲಾವತಿ ದಂಪತಿಯ ಸುಪುತ್ರಿಯಾಗಿರುತ್ತಾಳೆ.

