ಶಿಶಿಲ, ಜ. 13 : ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರುಗೊಂಡಿದೆ. ಈ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಶೀಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಭಿನಂದನೆ ಸಲ್ಲಿಸಿದೆ.
ಬೆಳ್ತಂಗಡಿ ಸಂತೆಕಟ್ಟೆಯ ಬಳಿ ಇರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಕಛೇರಿಗೆ ಆಗಮಿಸಿದ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ.

