ಬಿಜೆಪಿಗರ ಅಕ್ರಮ, ಅನಧಿಕೃತ ದಂಧೆಗಳಿಗೆ ಕಡಿವಾಣದ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಶಾಸಕ ಹರೀಶ್ ಪೂಂಜಾ ವಿರೋಧಿಸುತ್ತಿದ್ದಾರೆ : ರಕ್ಷಿತ್ ಶಿವರಾಂ

ಬೆಳ್ತಂಗಡಿ : ಬೆಳ್ತಂಗಡಿ ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ. ಬಿಜೆಪಿಗರ ಅಕ್ರಮ, ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿಗರು ವಿರೋಧಿಸುತ್ತಿದ್ದಾರೆ. ಪೋಲಿಸ್ ಇಲಾಖೆಯ ಬಲವರ್ಧನೆ ಮತ್ತು ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಇತ್ತೀಚಿಗೆ ಮಂಜೂರುಗೊಳಿಸಿ , ನೂತನ ಡಿವೈಎಸ್ಪಿ ನೇಮಿಸಿದ್ದಾರೆ. ಇದನ್ನು ಸಹಿಸದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿಗರು ವಿರೋಧಿಸಿ, ಪೋಲಿಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಉಂಟುಮಾಡಲು ಸುಳ್ಳು ಅಪಪ್ರಚಾರದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ .

Advertisement

ಪೋಲಿಸ್ ಇಲಾಖೆಯಿಂದ ಜನರು ಇನ್ನಷ್ಟು ಸಂಕಷ್ಟ ಎದುರಿಸುತ್ತಾರೆ, ಪೋಲಿಸರು ಜನರನ್ನು ಸುಲಿಗೆ ಮಾಡುತ್ತಾರೆ ಎಂದು ಸುಳ್ಳು ಅಪಪ್ರಚಾರ ನಡೆಸುತ್ತಿರುವ ಶಾಸಕರ ನಡೆ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದೆ. ಮನೆ ಮನೆಗೆ ಪೋಲಿಸ್ , ಜನಸ್ನೇಹಿ ಪೋಲಿಸ್ ಮೂಲಕ ಜನಸಾಮಾನ್ಯರ ನಡುವೆ ಬೆರೆಯುತ್ತಿರುವ ಪೋಲಿಸ್ ಇಲಾಖೆಯ ಬಗ್ಗೆ ಗೊಂದಲ ಸೃಷ್ಟಿಸುವ ಮೂಲಕ ತಾಲೂಕಿನಲ್ಲಿ ಅರಾಜಕತೆ ಉಂಟು ಮಾಡುತ್ತಿರುವುದು ದುರಂತ. ಓರ್ವ ಶಾಸಕನಾಗಿ , ವಕೀಲನಾಗಿ ಪೋಲಿಸ್ ಇಲಾಖೆಯ ಕಾರ್ಯವೈಖರಿ , ಕಾರ್ಯಚಟುವಟಿಕೆಗಳ ಬಗ್ಗೆ ಎಳ್ಳಷ್ಟು ಜ್ಞಾನ ಇಲ್ಲದಿರುವುದು ದುರಂತ. ಈ ಹಿಂದೆ ಅಕ್ರಮ ಗಣಿಗಾರಿಕೆ ಮಾಡುವವರ ಪರ ಮಧ್ಯರಾತ್ರಿ ಠಾಣೆಗೆ ನುಗ್ಗಿ ದಾಂದಲೆ ಮಾಡಿದವರು ಇವರೆಲ್ಲವೇ. ಇದಕ್ಕೆಲ್ಲ ಇನ್ನು ಮುಂದೆ ಕಡಿವಾಣ ಬೀಳಬಹುದು ಎಂಬ ಭಯ ಅವರಿಗಿರಬಹುದು. ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರ ಬಗ್ಗೆ ಕೇಸ್ ದಾಖಲಿಸುವುದು , ದಂಡ ವಿಧಿಸುವುದು ಇಡೀ ದೇಶದಾದ್ಯಂತ ಜಾರಿಯಲ್ಲಿದೆ. ಆದರೂ ರಾಜಕೀಯ ಮಾಡುವ ಉದ್ದೇಶದಿಂದ ಕೇವಲ ಕರ್ನಾಟಕ ಪೋಲಿಸರು ಮಾತ್ರ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ ಮೇಲೆ ಕೇಸ್ ದಾಖಲಿಸುತ್ತಾರೆ ಎಂಬ ಬಾಲಿಷತನದ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾರವರೇ , ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರನ್ನು ಸನ್ಮಾನ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು.. ಮತ್ತು ಇಂತಹ ಅಸಂಬದ್ಧ ಹೇಳಿಕೆ ನೀಡಿ ಪೋಲಿಸರ ಆತ್ಮಸ್ಥೈರ್ಯ ಕುಗ್ಗಿಸುವ ಷಡ್ಯಂತ್ರ ಇದು ಎಂದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.