ಮಂಗಳೂರು : ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

Advertisement

ಮಂಗಳೂರು, ಜು. 13 : ಪತ್ರಕರ್ತ, ಖ್ಯಾತ ರಂಗಕರ್ಮಿ, ಲೇಖಕ ಹಾಗೂ ಸಾಹಿತ್ಯಗಾರ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ.

Advertisement

ಪರಮಾನಂದ ಸಾಲ್ಯಾನ್ ಅವರು, ರಂಗಭೂಮಿಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು ಹಲವು ನಾಟಕಗಳನ್ನು ನಿರ್ದೇಶಿಸಿದ್ದು, ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದರು. ಕರಾವಳಿ ಭಾಗದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಗೌರವಾನ್ವಿತ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದರು.

Advertisement

ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು. ‘ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಅವರು, ಮುಂಗಾರು ಹಾಗೂ ಹೊಸ ದಿಗಂತ ಸೇರಿದಂತೆ ಹಲವು ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಕರಾವಳಿ ಕರ್ನಾಟಕ ಮತ್ತು ಮುಂಬೈನ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳಲ್ಲಿ ಅವರು ಚಿರಪರಿಚಿತರಾಗಿದ್ದರು.

ಅವರು ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಮಾಜಿ ಅಧ್ಯಕ್ಷರಾಗಿದ್ದು, ದೇವಾಲಯದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಆಡಳಿತ ಸಮಿತಿಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕುಟುಂಬದ ಮೂಲಗಳ ಪ್ರಕಾರ, ಪರಮಾನಂದ ಸಾಲ್ಯಾನ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆ 4 ಗಂಟೆಗೆ ಸಸಿಹಿತ್ಲುವಿನ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬಳಿಕ ಅಂತ್ಯಕ್ರಿಯೆ ನೆರವೇರಲಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ