ಬೆಂಗಳೂರು : “ದೋಸೆ, ಇಡ್ಲಿ, ಸಾಂಬಾರ್, ಚಟ್ನಿ” ತಂದ ಆಪತ್ತು –  ಆರ್ ಸಿಬಿ ವಿರುದ್ದ ಬಿಸಿಸಿಐ ಗೆ ದೂರು ನೀಡಿದ  ಚೆನ್ನೈ ಸೂಪರ್ ಕಿಂಗ್ಸ್

ಬೆಂಗಳೂರು, ಏ. 16 : ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಅಭಿಯಾನವನ್ನು ಅದ್ಭುತವಾಗಿ ಅರಂಭಿಸಿದೆ. ಆಡಿದ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದುಕೊಂಡಿರುವ ಆರ್ ಸಿಬಿ (RCB) ಸದ್ಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ತವರು ಮೈದಾನದಲ್ಲಿ ಆರ್ ಸಿಬಿ ಅಜೇಯವಾಗಿದೆ. ಚಿನ್ನಸ್ವಾಮಿಯಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲು ಗೆದ್ದುಕೊಂಡಿದೆ. ಇದರ ನಡುವೆ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರ್ ಸಿಬಿ ಆತಿಥ್ಯದ ವಿರುದ್ದ ಬಿಸಿಸಿಐ ಗೆ ದೂರು ನೀಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಡಿಜೆ ಹಾಡು ಆಯ್ಕೆ ಮತ್ತು ಕಾಮೆಂಟ್‌ಗಳ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ದೂರು ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ದಕ್ಷಿಣ ಭಾರತದ ಸ್ಟೀರಿಯೊಟೈಪ್‌ಗಳ ಬಗ್ಗೆ ಮೀಮ್‌ಗಳೊಂದಿಗೆ ಹೆಚ್ಚಾಗಿ ಬಳಸಲಾಗುವ ವೈರಲ್ ಹಾಡಾದ “ದೋಸೆ, ಇಡ್ಲಿ, ಸಾಂಬಾರ್, ಚಟ್ಟಿ, ಚಟ್ಟಿ” ಟ್ರ್ಯಾಕನ್ನು ಪಂದ್ಯದ ಸಮಯದಲ್ಲಿ ನುಡಿಸುವುದು ‘ಒಳ್ಳೆಯ ಅಭಿರುಚಿಯಲ್ಲ’ ಎಂದು ಸಿಎಸ್‌ಕೆ ತಮ್ಮ ದೂರಿನಲ್ಲಿ ತಿಳಿಸಿದೆ.

ಐಪಿಎಲ್‌ನ ಉನ್ನತ ಅಧಿಕಾರಿಯೊಬ್ಬರು ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಆಡಳಿತ ಮಂಡಳಿಯು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದರು.

ಸಿಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಕಾಶಿ ವಿಶ್ವನಾಥನ್‌ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಡಿಜೆಗಳು ಸಾಮಾನ್ಯವಾಗಿ ತವರು ತಂಡವನ್ನು ಬೆಂಬಲಿಸಲು ಇರುತ್ತಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಲ್ಲವೂ ವಿಭಿನ್ನವಾಗಿತ್ತು. ನಮ್ಮ ಆಟಗಾರರ ವಿರುದ್ಧ ಕೆಲವು ಟೀಕೆಗಳನ್ನು ಮಾಡಲಾಗಿತ್ತು. ಇದನ್ನು ಪರಿಗಣಿಸಿ, ನಾವು ಅದನ್ನು ಪರಿಶೀಲಿಸಲು ಬಿಸಿಸಿಐಗೆ ಪತ್ರ ಬರೆದಿದ್ದೇವೆ” ಎಂದಿದ್ದಾರೆ.

ಮ್ಯೂಸಿಕ್ ಡೈರೆಕ್ಟರ್ ಗಾನ ಅಪ್ಪು ಸಂಯೋಜಿಸಿರುವ ಈ ಹಾಡು ಸಿಎಸ್‌ಕೆ-ಆರ್‌ಸಿಬಿ ಪೈಪೋಟಿಯೊಂದಿಗೆ ದೀರ್ಘ ಸಂಬಂಧ ಹೊಂದಿದೆ. ಅಭಿಮಾನಿಗಳು ಇದನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಬಳಸುತ್ತಾರೆ. ಕಳೆದ ವರ್ಷ, ಆರ್‌ಸಿಬಿ ಫ್ರಾಂಚೈಸಿಯು ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ಜಿತೇಶ್‌ ಶರ್ಮಾ ಹಾಡನ್ನು ಹಾಡುತ್ತಿರುವ ವೀಡಿಯೊವನ್ನು ಸಹ ಪೋಸ್ಟ್ ಮಾಡಿತ್ತು. ಈ ಕಾಮೆಂಟ್‌ಗಾಗಿ ಸಿಎಸ್‌ಕೆ ಅಭಿಮಾನಿಗಳು ಅವರನ್ನು ಟೀಕಿಸಿದರು.

ಆರ್‌ಸಿಬಿ ಪಂದ್ಯದ ಸಮಯದಲ್ಲಿ ತಮ್ಮ ಆಟಗಾರರು ಔಟಾದ ನಂತರ ಡಿಜೆ ಮಾಡಿದ ಕಾಮೆಂಟ್‌ಗಳಿಂದ ಸಿಎಸ್‌ ತಂಡದ ಆಡಳಿತ ಮಂಡಳಿಯೂ ಅತೃಪ್ತವಾಗಿತ್ತು. “ಡಿಜೆ ಪ್ರತಿಸ್ಪರ್ಧಿಗಳನ್ನು ದುರ್ಬಲಗೊಳಿಸಲು ಅಥವಾ ಅವರನ್ನು ಅವಮಾನಿಸಲು ಇರುವುದಲ್ಲ”ಎಂದು ಸಿಎಸ್‌ಕೆ ಅಧಿಕಾರಿಯೊಬ್ಬರು ಹೇಳಿದರು.

ಆರ್ ಸಿಬಿ-ಸಿಎಸ್ ಕೆ ಪಂದ್ಯದಲ್ಲಿ ಬೆಂಗಳೂರು ತಂಡವು 43 ರನ್ ಅಂತರದ ಜಯ ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಬೆಂಗಳೂರು ಮೂರು ವಿಕೆಟ್ ಗೆ 250 ರನ್ ಮಾಡಿದ್ದರೆ, ಸಿಎಸ್ ಕೆ 207 ರನ್ ಗೆ ಆಲೌಟಾಗಿತ್ತು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.