ಆರ್ ಸಿಬಿ ಅಭಿಮಾನಿಗಳಿಗೆ ಶುಭಸುದ್ದಿ – ಕೊನೆಗೂ ಆರ್ ಸಿಬಿ’ಯ ತವರು ಮೈದಾನವಾಗಿ ಚಿನ್ನಸ್ವಾಮಿ ಫಿಕ್ಸ್ ?

Advertisement

ಬೆಂಗಳೂರು, ಡಿ. 12 : ಬಹಳಷ್ಟು ಕುತೂಹಲ ಮೂಡಿಸಿದ್ದ ಈ ಬಾರಿ ಐಪಿಎಲ್ ನಲ್ಲಿ ಆರ್ ಸಿಬಿ’ಯ ತವರು ಮೈದಾನ ಯಾವುದು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಬಹುತೇಕ ಅಂತಿಮವಾಗಿದೆ. ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರವು ಶುಭಸುದ್ದಿ ನೀಡಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ.

Advertisement

ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪಂದ್ಯದ ವೇಳೆ ಏನೇನು ಕ್ರಮ ಅನುಸರಿಸಬೇಕು ಅನ್ನೋದರ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯು (KSCA) ಗೃಹ ಇಲಾಖೆಯೊಂದಿಗೆ ಚರ್ಚಿಸಬೇಕಿದೆ. ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.

Advertisement

ಕಳೆದ ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು, ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಕೂಡ ಕೈತಪ್ಪಿತ್ತು. ಆದರೆ, ಹೆಚ್ಚಿನ ಭದ್ರತೆಯೊಂದಿಗೆ ಮುಂದಿನ ಪಂದ್ಯಾವಳಿಗಳು ನಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ