ಬೆಳ್ತಂಗಡಿ, ಏ. 07 : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಆರ್ಯಮನ್ ಹಾಗೂ ಕಿಯಾಂಶ್ ಉಪಸ್ಥಿತರಿದ್ದರು. ನಂತರ ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರಿಂದ ರಂಗಪೂಜೆ ಸೇವೆ ನೆರವೇರಿತು.

