ಬೆಳ್ತಂಗಡಿ : ಧನು ಪೂಜೆಗೆ ತೆರಳಿದ್ದ ಬಾಲಕನ ಸಾವು ಪ್ರಕರಣ – ಸಂಬಂಧಿಕನೇ ಕೊಲೆಗಾರ…!?

ಬೆಳ್ತಂಗಡಿ:, ಜ. 16 : ಬೆಳಗ್ಗೆ ಧನು ಪೂಜೆಗೆಂದು ದೇವಸ್ಥಾನಕ್ಕೆ ಹೊರಟಿದ್ದ ಬಾಲಕನೊಬ್ಬ ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ಸುಳಿವು ಲಭ್ಯವಾಗಿದೆ. ಆರಂಭದಿಂದಲೇ ಇದೊಂದು ವ್ಯವಸ್ಥಿತ ಕೊಲೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದ್ದು, ಇದೇ ಹಾದಿಯಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಇದೀಗ ಸುಮಂತ್ ಸಾವು ಪ್ರಕರಣದಲ್ಲಿ ಮತ್ತೊಂದು ಮಹತ್ವದ ಮಾಹಿತಿ ಲಭಿಸಿದೆ.

Advertisement

9ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಸಾವು ಪ್ರಕರಣ ಸಂಬಂಧ ವದಂತಿಯೊಂದು ಹಬ್ಬಿದ್ದು, ಆತನನ್ನು ಬಾಲಕನ ಸಂಬಂಧಿಯೇ ಕೊಲೆಗೈದಿರುವ ಬಗ್ಗೆ ಶಂಕೆ ಬಲವಾಗುತ್ತಿದೆ. ಪೊಲೀಸರು ನಡೆಸಿರುವ ತನಿಖೆಯಲ್ಲಿ ಸಂಬಂಧಿಕನೇ ಕೊಲೆ ನಡೆಸಿರುವ ವದಂತಿ ಹಬ್ಬುತ್ತಿದೆ. ಈ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಬಹಿರಂಗಪಡಿಸಿಲ್ಲ. ಕೊಲೆಯೇ ಎಂಬ ಬಗ್ಗೆಯೂ ಕೂಡಾ ಪೊಲೀಸರು ಸ್ಪಷ್ಟನೆ ನೀಡಿಲ್ಲ. ಸದ್ಯ ಬಾಲಕನನ್ನು ಕೊಂದಿರುವುದು ಆತನ ಸಂಬಂಧಿಕನೇ ಎಂಬ ವದಂತಿ ಹಬ್ಬಿದ್ದು, ಈ ಬಗ್ಗೆ ಪೊಲೀಸರೇ ಸ್ಪಷ್ಟನೆ ನೀಡಬೇಕಿದೆ.

ಬಾಲಕನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ, ಇದು ವ್ಯವಸ್ಥಿತ ಕೊಲೆಯೋ ಅಥವಾ ಆಕಸ್ಮಿಕ ಸಾವೋ ? ಎಂಬ ಬಗ್ಗೆ ಹಾಗೂ ಕೊಲೆಯೇ ಆಗಿದ್ದಲ್ಲಿ ಕೊಲೆಗೈದವರು ಯಾರು ? ಎಂಬುದು ಕೂಡಾ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

ಘಟನೆ ವಿವರ :

ಧನು ಮಾಸದ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ಸುಮಂತ್ ಪ್ರತಿ ದಿನ ನಾಳ ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಬೆಳಗ್ಗೆ ಬೇಗ ಎದ್ದು ದೇವಸ್ಥಾನಕ್ಕೆ ಹೋಗುವ ಪರಿಪಾಠ ಬೆಳೆಸಿಕೊಂಡಿದ್ದ. ಅದರಂತೆ ಧನು ಸಂಕ್ರಮಣದ ಕೊನೆಯ ದಿನವಾದ ಬುಧವಾರ ಬೆಳಗ್ಗೆ ಮನೆಯಿಂದ ಬೆಳಗ್ಗೆ 4.30 ಗಂಟೆಗೆ ದೇವಸ್ಥಾನಕ್ಕೆ ತೆರಳಿದ್ದ. ಆದರೆ ಆನಂತರ ಮನೆಗೆ ಹಿಂತಿರುಗದೇ ಇದ್ದಾಗ ಮನೆಯವರು ಹುಡುಕಾಡಿದ್ದು 500 ಮೀಟ‌ರ್ ದೂರದ ಬಾವಿಯಲ್ಲಿ ಶವ ಪತ್ತೆಯಾಗಿತ್ತು.

ಆರಂಭದಲ್ಲಿ ಸುಮಂತ್‌ನನ್ನು ಚಿರತೆ ಒಯ್ದಿರುವ ಬಗ್ಗೆ ಸ್ಥಳಿಯರಲ್ಲಿ ಪ್ರಚಾರ ಹಬ್ಬಿದ್ದು, ಬೆಳ್ತಂಗಡಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸಮೀಪದ ಕೆರೆಯಲ್ಲಿ ಹುಡುಕಾಡಿದಾಗ ಬಾಲಕನ ದೇಹ ಪತ್ತೆಯಾಗಿತ್ತು. ಬಾಲಕನ ದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಬಾವಿಗೆ ಬಿದ್ದ ಸಂದರ್ಭದಲ್ಲಿ ಆಗಿರುವ ಗಾಯಗಳೇ ಎಂಬ ಸಂಶಯ ಮೂಡಿತ್ತು. ಸ್ಥಳಕ್ಕೆ ಎಸ್ಪಿ ಅರುಣ್ ಭೇಟಿ ನೀಡಿ, ಪ್ರಕರಣದ ಕೂಲಂಕುಷ ತನಿಖೆಗೆ ನಾಲ್ಕು ತಂಡಗಳನ್ನು ರಚನೆ ಮಾಡಿ, ತನಿಖೆ ಕೈಗೆತ್ತಿಕೊಂಡಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.